ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು
|
ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇ……
ಮಾತೆ ತುಂಗಭದ್ರೆ
ಹರಿಯುತಿಹಳು ಇಲ್ಲಿ
ಮಾನವನ ಪಾಪವನು ತೊಳೆವ ಕಲ್ಪವಲ್ಲಿ
ಮಾನವನ ಪಾಪವನು ತೊಳೆವ ಕಲ್ಪವಲ್ಲಿ||1||
ದೇವ ವಿರೂಪಾಕ್ಷ
ಈವ ನಮಗೆ ರಕ್ಷ
ಜೀವಿಗೆ ತಾ ನೀಡುವನು
ಧರ್ಮದ ದೀಕ್ಷ
ಜೀವಿಗೆ ತಾ ನೀಡುವನು
ಧರ್ಮದ ದೀಕ್ಷ ||2||
ಕಡಿದು ಸುತ್ತಮುತ್ತಲಿದ್ದ
ಗೊಂಡಾರಣ್ಯ
ಸ್ಥಾಪಿಸಿದನು ವಿಜಯನಗರ ವಿದ್ಯಾರಣ್ಯ
ಹಕ್ಕಬುಕ್ಕರಾಳಿ
ಭವ್ಯತೆಯನು ತಾಳಿ
ದಿಕ್ಕು ದಿಕ್ಕು ಶಾಂತಿ ಸುಖದ ಕಹಳೆಯು ಕೇಳಿ ||3||
No comments:
Post a Comment