ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ SONG LYRICS | ಕನಕದಾಸರು |BAGILANU TEREDU SONG LYRICS IN KANNADA

 ಹಾಡಲು ಕಲಿಯಿರಿ(CLICK HERE TO LEARN THIS SONG)

ರಚನೆ: ಕನಕದಾಸರು

ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ

ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿಸಹಿತ ಕ್ಷೀರವಾರಿಧಿಯೊಳಿರಲು
ಕರಿರಾಜ ಕಷ್ಟದಲಿ ಆದಿಮೂಲಾ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೋ ನರಹರಿಯೇ ||1||

ಕಡು ಕೋಪದಲಿ ಖಳನು ಖಡುಗವನು ಹಿಡಿದು
ನಿನ್ನೊಡೆಯನೆಲ್ಲಿಹನು ಎಂದು ನುಡಿಯೇ
ದೃಢ ಭಕಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆ
ಸಡಗರದಿ ಕಂಭದಿಂದೊಡೆದೆಯೋ ನರಹರಿಯೇ ||2||

ಯಮಸುತನ ರಾಣಿಗೆ ಅಕ್ಷಯವಸನವಿತ್ತೆ
ಸಮಯದಲಿ ಅಜಮಿಳನ ಪೊರೆದೆ
ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಲಾಕ್ಷ ಕಾಗಿನೆಲೆಯಾದಿ ಕೇಶವನೆ ||3||
.........................................................................................................


No comments:

Post a Comment

ಹೂವು ಚೆಲುವೆಲ್ಲ ನಂದೆಂದಿತು SONG LYRICS | HOOVU CHELUVELLA NANDENDITHU | ಹಣ್ಣೆಲೆ ಚಿಗುರಿದಾಗ MOVIE SONG

ಹಾಡಲು ಕಲಿಯಿರಿ(CLICK HERE TO LEARN THIS SONG)   ಹೂವು ಚೆಲುವೆಲ್ಲ ನಂದೆಂದಿತು ಹೆಣ್ಣು ಹೂವ ಮುಡಿದು ಚೆಲುವೇ ತಾನೆಂದಿತು ಹೂವು ಚೆಲುವೆಲ್ಲ ನಂದೆಂದಿ...