ಹಾಡಲು ಕಲಿಯಿರಿ(CLICK HERE TO LEARN THIS SONG)
ರಚನೆ: ಕನಕದಾಸರು
ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ
ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿಸಹಿತ ಕ್ಷೀರವಾರಿಧಿಯೊಳಿರಲು
ಕರಿರಾಜ ಕಷ್ಟದಲಿ ಆದಿಮೂಲಾ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೋ ನರಹರಿಯೇ ||1||
ಕಡು ಕೋಪದಲಿ ಖಳನು ಖಡುಗವನು ಹಿಡಿದು
ನಿನ್ನೊಡೆಯನೆಲ್ಲಿಹನು ಎಂದು ನುಡಿಯೇ
ದೃಢ ಭಕಿಯಲಿ ಶಿಶುವು ಬಿಡದೆ ನಿನ್ನನು
ಭಜಿಸೆ
ಸಡಗರದಿ ಕಂಭದಿಂದೊಡೆದೆಯೋ ನರಹರಿಯೇ ||2||
ಯಮಸುತನ ರಾಣಿಗೆ ಅಕ್ಷಯವಸನವಿತ್ತೆ
ಸಮಯದಲಿ ಅಜಮಿಳನ ಪೊರೆದೆ
ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಲಾಕ್ಷ ಕಾಗಿನೆಲೆಯಾದಿ ಕೇಶವನೆ ||3||
.........................................................................................................
No comments:
Post a Comment