ತಲ್ಲಣಿಸದಿರು ಕಂಡ್ಯ ತಾಳು ಮನವೇ SONG LYRICS | TALLAnISADIRU KANDYA SONG LYRICS |

 ಹಾಡಲು ಕಲಿಯಿರಿ(CLICK HERE TO LEARN THIS SONG)

ರಚನೆ : ಕನಕದಾಸರು

ತಲ್ಲಣಿಸದಿರು ಕಂಡ್ಯ ತಾಳು ಮನವೇ
ಎಲ್ಲರನು ಸಲಹುವನು ಇದಕೆ ಸಂಶಯಬೇಡ ||

ಬೆಟ್ಟದ ತುದಿಯಲ್ಲಿ ಹುಟ್ಟಿರುವ ವೃಕ್ಷಕ್ಕೆ
ಕಟ್ಟೆಯನು ಕಟ್ಟಿ ನೀರೆರೆದವರು ಯಾರು
ಹುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲು
ಗಟ್ಯಾಗಿ ಸಲಹುವನು ಇದಕೆ  ಸಂಶಯಬೇಡ||1||

ಕಲ್ಲೊಳಗೆ  ಹುಟ್ಟಿರುವ ಕ್ರಿಮಿ ಕೀಟಗಳಿಗೆಲ್ಲ
ಅಲ್ಲಲ್ಲಿಗಾಹಾರ ಇತ್ತವರು ಯಾರೋ
ಬಲ್ಲಿದನು ಕಾಗಿನೆಲೆಯಾದಿ ಕೇಶವರಾಯ
ಎಲ್ಲರನು ಸಲಹುವನು ಇದಕೆ ಸಂಶಯಬೇಡ||2||
......................................................................................


No comments:

Post a Comment

ಪಂಢರಾಪುರವೆಂಬ ದೊಡ್ಡ ನಗರ LYRICS IN KANNADA |PANDARAPURAVAMBA DODDA NAGARA |PURANDARA DASA SONGS

  ಹಾಡಲು ಕಲಿಯಿರಿ(CLICK HERE TO LEARN THIS SONG) ಪಂಢರಾಪುರವೆಂಬ ದೊಡ್ಡ ನಗರ ಅಲ್ಲಿ ವಿಠೋಬನೆಂಬ ದೊಡ್ಡ ಸಾಹುಕಾರ || ಪ || ವಿಠೋಬನಿರುವದು ನದಿ...