ಹಾಡಲು ಕಲಿಯಿರಿ(CLICK HERE TO LEARN THIS SONG)
ರಚನೆ : ಕನಕದಾಸರು
ತಲ್ಲಣಿಸದಿರು ಕಂಡ್ಯ ತಾಳು ಮನವೇ
ಎಲ್ಲರನು ಸಲಹುವನು ಇದಕೆ ಸಂಶಯಬೇಡ ||
ಬೆಟ್ಟದ ತುದಿಯಲ್ಲಿ ಹುಟ್ಟಿರುವ ವೃಕ್ಷಕ್ಕೆ
ಕಟ್ಟೆಯನು ಕಟ್ಟಿ ನೀರೆರೆದವರು ಯಾರು
ಹುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲು
ಗಟ್ಯಾಗಿ ಸಲಹುವನು ಇದಕೆ ಸಂಶಯಬೇಡ||1||
ಕಲ್ಲೊಳಗೆ ಹುಟ್ಟಿರುವ ಕ್ರಿಮಿ ಕೀಟಗಳಿಗೆಲ್ಲ
ಅಲ್ಲಲ್ಲಿಗಾಹಾರ ಇತ್ತವರು ಯಾರೋ
ಬಲ್ಲಿದನು ಕಾಗಿನೆಲೆಯಾದಿ ಕೇಶವರಾಯ
ಎಲ್ಲರನು ಸಲಹುವನು ಇದಕೆ ಸಂಶಯಬೇಡ||2||
......................................................................................
No comments:
Post a Comment